Wheelchair Distribution Drive at Kuthloor Village Stay Programme

Wheelchair Distribution Drive

ಬೆಳ್ತಂಗಡಿ: ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬೆಳ್ತಂಗಡಿ ತಾಲೂಕಿನ ನಕ್ಸಲ್ ಪೀಡಿತ ಪ್ರದೇಶವಾಗಿದ್ದ ಕುತ್ಲೂರು ಗ್ರಾಮದಲ್ಲಿ ಹಮ್ಮಿಕೊಳ್ಳಲಾದ ಐತಿಹಾಸಿಕ 'ಗ್ರಾಮ ವಾಸ್ತವ್ಯ' ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಅರ್ಹ ವಿಶೇಷ ಚೇತನ ಫಲಾನುಭವಿಗಳಿಗೆ ಉಚಿತವಾಗಿ ವೀಲ್ ಚೇರ್ ಮತ್ತು ಆರ್ಥಿಕ ವೈದ್ಯಕೀಯ ನೆರವನ್ನು ವಿತರಿಸಲಾಯಿತು.

ಗ್ರಾಮದ ಶಾಲೆ ಆವರಣದಲ್ಲಿ ನಡೆದ ಅಭಿವೃದ್ಧಿ ಸಭೆಯಲ್ಲಿ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ಮಾಧ್ಯಮದ ಮುಖಂಡರು ಭಾಗವಹಿಸಿ ಹಳ್ಳಿಯ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು ಮತ್ತು ವಿದ್ಯುತ್ ಸೌಲಭ್ಯಗಳ ಪರಿಶೀಲನೆ ನಡೆಸಿದರು. ಪತ್ರಕರ್ತರ ಸಂಘವು ಹಳ್ಳಿಯ ಜನರ ನೋವಿಗೆ ಸ್ಪಂದಿಸುವ ಮೂಲಕ ಕೇವಲ ವರದಿಗಾರಿಕೆಯನ್ನಷ್ಟೇ ಮಾಡದೆ ಜನಸೇವೆಯಲ್ಲೂ ತನ್ನ ಮುಂಚೂಣಿಯ ಸಾಮಾಜಿಕ ಬದ್ಧತೆಯನ್ನು ಸಾಬೀತುಪಡಿಸಿದೆ.